Advertisement
ಕಾರ್ಯಕ್ರಮಗಳು

ಕಲ್ಮಡ್ಕದಲ್ಲಿ ಕೃಷಿ ವಿಚಾರ ಸಂಕಿರಣ-ಆರೋಗ್ಯ ತಪಾಸಣಾ ಶಿಬಿರ: ನಾನಾ ತಳಿಯ ಹಣ್ಣುಗಳ ಕೃಷಿಗೆ ಒತ್ತು ನೀಡಿ: ಅನಿಲ್ ಬಳಂಜ

Share

ಸುಳ್ಯ: ರಬ್ಬರ್, ಅಡಿಕೆ ಬೆಳೆಗಳ ಜತೆಯಲ್ಲಿ ನಾನಾ ತಳಿಯ ಹಣ್ಣುಗಳ ಕೃಷಿಗೆ ಒತ್ತು ನೀಡಿದ್ದಾಗ ಕೃಷಿಕನ ಬದುಕು ಹಸನಾಗುತ್ತದೆ ಎಂದು ಪ್ರಗತಿಪರ ಹಣ್ಣುಗಳ ಕೃಷಿಕ ಅನಿಲ್ ಬಳಂಜ ಹೇಳಿದರು.

ಅವರು ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ಭಾನುವಾರ ನಡೆದ ಅಡಿಕೆ ಮತ್ತು ಸಾಂಪ್ರಾಯಿಕ ಕೃಷಿ ಬೆಳೆಗಳಿಗೆ ಪರ್ಯಾಯವಾಗಿ ನಾನಾ ತಳಿಯ ಹಣ್ಣು ಹಂಪಲುಗಳನ್ನು ಬೆಳೆಸುವ ಕುರಿತು ಕೃಷಿ ವಿಚಾರ ಸಂಕಿರಣದಲ್ಲಿ ಸಂನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದರು. ವಿಶಿಷ್ಟ ತಳಿಯ ಹಣ್ಣುಗಳಿಗೆ ಸಾಕಷ್ಟು ಬೇಡಿಕೆ ಇದೆ. ಅಡಿಕೆ, ರಬ್ಬರ್ ಗಿಂತ ಅಧಿಕ ಇಳುವರಿಯನ್ನು ಪಡೆದು, ಲಾಭಾಂಶವನ್ನು ಪಡೆಯಬಹುದು. ಜತೆಗೆ ಹಣ್ಣಿನ ಬೀಜದಲ್ಲೂ ಆಧಾಯಗಳಿಸಬಹುದು ಎಂದು ಅನಿಲ್ ಬಳಂಜ ಹೇಳಿದರು.

ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಕೆ.ಎನ್.ಪರಮೇಶ್ವರಯ್ಯ ವಹಿಸಿದರು. ಕಾರ್ಯಕ್ರಮವನ್ನು ಎ.ಒ.ಎಲ್.ಇ ನಿರ್ದೇಶಕ ಅಕ್ಷಯ್ ಕೆ.ಸಿ. ಉದ್ಘಾಟಿಸಿದರು. ರಕ್ತದಾನದ ಬಗ್ಗೆ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಮಾಹಿತಿ ನೀಡಿದರು.

ಮುಖ್ಯಅತಿಥಿಗಳಾಗಿ ಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸಂತೋಷ್ ಕುತ್ತಮೊಟ್ಟೆ, ವೈದ್ಯರುಗಳಾದ ಡಾ.ಈಶ್ವರಯ್ಯ ಜಿ., ಡಾ.ಶಶಿಧರ್ ಪಡೀಲ್, ಕಲ್ಮಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಮೂರ್ತಿ, ಪಡ್ಪಿನಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ನಡ್ಕ ಅತಿಥಿಗಳಾಗಿದ್ದರು ವೇದಿಕೆಯಲ್ಲಿ ಕಲ್ಮಡ್ಕ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ, ಉಪಾಧ್ಯಕ್ಷ ಗಂಗಾಧರ ಗೌಡ ಅಕ್ರಿಕಟ್ಟೆ, ಸಮಿತಿಯ ಗೌರವಾಧ್ಯಕ್ಷ ಕೆ.ಕೆ.ನಾರಾಯಣ ಚಳ್ಳಂಗಾರು, ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ನಡ್ಕ, ಸಂಘದ ಆಡಳಿತ ಮಂಡಳಿ ನಿರ್ದೇಶಕರುಗಳಾದ ಶಂಕರ ನಾರಾಯಣ ಭಟ್, ಮಹಾಬಲ ಕೆ., ಸುಧಾ ಎಸ್.ಭಟ್, ಲಲಿತಾ ಪಿ., ಮಹಮ್ಮದ್ ಹನೀಫ್, ರಾಮನಾಯ್ಕ ಯು., ಕರುಣಾಕರ ಜೆ. ಇದ್ದರು. ಈ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತ ವರ್ಗೀಕರಣ ಶಿಬಿರ ನಡೆಯಿತು.

ವಿಚಾರ ಸಂಕಿರಣ: ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ನಡೆದ ಕೃಷಿ ವಿಚಾರ ಸಂಕಿರಣ-ಆರೋಗ್ಯ ತಪಾಸಣಾ ಶಿಬಿರವನ್ನು ಅಕ್ಷಯ್ ಕೆ.ಸಿ.ಉದ್ಘಾಟಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

54 minutes ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

18 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago