Advertisement
ಸುದ್ದಿಗಳು

ಕಲ್ಮಡ್ಕ ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

Share

ಕಲ್ಮಡ್ಕ : ಕಲ್ಮಡ್ಕ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ  ಪಡ್ಪಿನಂಗಡಿಯ ಶಿವಗೌರಿ ಕಲಾಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಧರ್ಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖೆಯ ವತಿಯಿಂದ  ಹವಾಮಾನದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಸರಕಾರದಿಂದ ದೊರೆಯುವ ನಷ್ಟ ಪರಿಹಾರದ ಕುರಿತು ಮಾಹಿತಿ ನೀಡಿದರು. ಕೊಳೆ ರೋಗಕ್ಕೆ ಪರಿಹಾರೋಪಯವನ್ನು ಸಭೆಯಲ್ಲಿ ತಿಳಿಸಲಾಯಿತು. ತೋಟಗಾರಿಕಾ ಇಲಾಖೆ ವತಿಯಿಂದ ದೊರೆಯುವ ಗಿಡಗಳು, ಜೇನು ಕೃಷಿಗೆ, ಬಾಳೆ ಕೃಷಿಗೆ ಸಬ್ಸಿಡಿ ಹಾಗು ಕಾಳು ಮೆಣಸಿನ ಕೃಷಿಗೆ ದೊರೆಯುವ ಸಹಾಯ ಧನದ ಕುರಿತು ಸಮಗ್ರವಾಗಿ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಲಾಯಿತು.

ಹಿಂದುಳಿದ ವರ್ಗಕ್ಕೆ ಸ್ವ ಉದ್ಯೊಗ ಸೃಷ್ಠಿ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ತಾಲೂಕಿನಲ್ಲಿ ಇಂದು ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡ ವರ್ಗದ ವಿದ್ಯಾರ್ಥಿಗಳಿಗೆಂದೆ 11 ಹಾಸ್ಟೆಲ್‍ಗಳಿವೆ. ಒಂದನೆ ತರಗತಿಯಿಂದ ಏಳನೆ ತರಗತಿ ವಿದ್ಯಾರ್ಥಿಗಳಿಗೆ 1000 ಸಾವಿರ ರೂಪಾಯಿ ಹಾಗು 8ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗಿನ ವಿದ್ಯಾರ್ಥಿಗಳಿಗೆ 2000 ಸಾವಿರ ರೂಪಾಯಿಗಳಂತೆ ವಿದ್ಯಾರ್ಥಿ ವೇತನವನ್ನು ಇಲಾಖೆಯಿಂದ ನೀಡಲಾಗುತ್ತಿದೆ.

ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ನೀಡುವ ಕುರಿತು:
ಕೃಷಿ ಇಲಾಖೆ ಅಧಿಕಾರಿ ಮಾಹಿತಿ ನೀಡಿ ಕೃಷಿ ಭಾಗ್ಯ ಯೋಜನೆಗೆ ಸರಕಾರದಿಂದ 2ಲಕ್ಷ ರೂಪಾಯಿ ತಾಲೂಕಿಗೆ ದೊರೆತಿದೆ. ಸಾರ್ವಜನಿಕರು ಕೃಷಿ ಹೊಂಡ ನಿರ್ಮಾಣಕ್ಕೆ ಪಂಚಾಯತ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಿಂದುಳಿದ ವರ್ಗದವರಿಗೆ 1ಲಕ್ಷ ರೂಪಾಯಿ ಹಾಗು ಸಾಮಾನ್ಯರಿಗೆ 50000 ಸಾವಿರ ಸಾಹಯಧನ ದೊರೆಯುವುದಾಗಿ ಅಧಿಕಾರಿ ಹೇಳಿದರು.

ಕಾನೂನು ಪಾಲನೆಯ ಕುರಿತು ಪೊಲೀಸರಿಂದ ಮಾಹಿತಿ:
ಕಾನೂನು ಪರಿಪಾಲನೆಯ ಕುರಿತು ಮಾತನಾಡುತ್ತಾ ಬೆಳ್ಳಾರೆ ಠಾಣೆಯ ಪ್ರೊಬೇಷನರಿ ಎಸ್.ಐ ಆಂಜನೇಯ ರೆಡ್ಡಿಯವರು ಕಾನೂನು ನಿರ್ಧರಿಸಿದಂತೆ ರಿಕ್ಷಗಳಲ್ಲಿ ನಿಗದಿಪಡಿಸಿದಂತೆ 4 ಕ್ಕಿಂತ ಹೆಚ್ಚಿನ ಜನರನ್ನು ಹೇರಿಕೊಂಡು ಚಲಾಯಿಸಿದರೆ ಅಂಥವರ ಚಾಲನಾ ಪರವಾನಿಗೆಯನ್ನು 4 ತಿಂಗಳು ಅಮಾನತಿನಲ್ಲಿಡಲಾಗುವುದು ಎಂದರು. ಅಂತಯೆ ಹಲವಾರು ಬಾರಿ ಮಾನವೀಯ ನೆಲೆಯಲ್ಲಿ ಪೊಲೀಸ್ ಇಲಾಖೆಯವರು ವಾಹನ ಸವಾರರ ಪರಿಸ್ಥಿತಿಯನ್ನು ಅರಿತು ನಡೆದುಕೊಳ್ಳುತ್ತಾರೆ ಎಂದು ಹೇಳಿದರು. ಗ್ರಾಮಸ್ಥ ಜಯರಾಮ್ ಗಾಂಜಾದಂತಹ ಪ್ರಕರಣದಲ್ಲಿ ದಯವಿಟ್ಟು ಮಾನವೀಯತೆ ತೋರದಿರಿ ಎಂದು ವಿನಂತಿಸಿದರು.

ಗ್ರಾಮ ಪಂಚಾಯತ್‍ನಲ್ಲಿಯೇ ಆಧಾರ್ ತಿದ್ದುಪಡಿ ನಡೆಸುವಂತೆ, ಕಲ್ಮಡ್ಕ ಭಾಗದಲ್ಲಿ ಎಟಿಎಂ ಅಳವಡಿಸುವಿಕೆ ಬಗ್ಗೆ, ಪಡ್ಪಿನಂಗಡಿ ಸರ್ಕಾರಿ ಶಾಲೆಗೆ ಆಮಗ್ಲ ಭಾಷೆಗೆ ಶಿಕ್ಷಕರ ನೇಮಕ ಕುರಿತು ಗ್ರಾಮಸ್ಥರು ಆಗ್ರಹಿಸಿದರು.

ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಾರಿಜ ಪಿ.ಎಸ್, ನೋಡೆಲ್ ಅಧಿಕಾರಿ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ಲಕ್ಷ್ಮೀಶ ರೈ ಉಪಸ್ಥಿತರಿದ್ದರು. ಪಿಡಿಒ ಪ್ರವೀಣ್‍ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

22 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago