Advertisement
ಸುದ್ದಿಗಳು

ಕಲ್ಮಡ್ಕ ದೊಡ್ಡತೋಟ ರಸ್ತೆಗಿಲ್ಲ ಬಸ್ ಭಾಗ್ಯ…!

Share

ಪಾಜಪಳ್ಳದಿಂದ ಕಲ್ಮಡ್ಕ ಗ್ರಾಮದ ಮೂಲಕ ಅಮರಮೂಡ್ನೂರು, ದೊಡ್ಡತೋಟ ಮೂಲಕ ಸುಲಭವಾಗಿ ಸುಳ್ಯಕ್ಕೆ ತಲುಪಬಹುದಾದ ಈ ರಸ್ತೆಯಲ್ಲಿ ಕಲ್ಮಡ್ಕದಿಂದ ಸುಳ್ಯಕ್ಕೆ ಬಸ್ ಬೇಕೆಂದು ಮನವಿ ಮಾಡಿದರೂ ಬಸ್ಸಿನ ವ್ಯವಸ್ಥೆಯಾಗಿಲ್ಲವೆಂದು ಸಾರ್ವಜನಿಕರು ಈಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಯ ಮತ್ತು ಪುತ್ತೂರು ಡಿಪೋದಿಂದ 9 ಬಸ್ಸುಗಳು ಕಲ್ಮಡ ತನಕ ಬರುತ್ತದೆ. ಅಯ್ಯನಕಟ್ಟೆ ಕಳಂಜ ಮಾರ್ಗವಾಗಿಯೂ ಕುಕ್ಕುಜಡ್ಕ, ಅಮರಪಡ್ನೂರಿಗೆ ಸೀಮಿತ ಸಂಖ್ಯೆಯ ಬಸ್ಸುಗಳಿವೆ. ಆದರೆ ಕಲ್ಮಡ್ಕ ಕುಕ್ಕುಜಡ್ಕ ಮಾರ್ಗವಾಗಿ ಯಾವುದೇ ಬಸ್ಸುಗಳ ಸೌಲಭ್ಯವಿಲ್ಲ. ಕಲ್ಮಡ್ಕದ ಮುಂದೆ ಮತ್ತಿಗುಡ್ಡೆ, ಹಾಸನಡ್ಕ, ಉರುಂಬಿ ಸೇರಿದಂತೆ ಮುಂತಾದ ಊರುಗಳು ಸಿಗುತ್ತವೆ. ಆ ಊರಿನ ಜನರು ಸರಕಾರಿ ಬಸ್ಸುಗಳನ್ನು ಹಿಡಿಯಬೇಕಾದರೆ 5 ಕಿ.ಮಿ ನಡೆದುಕೊಂಡು ಬರಬೇಕಾಗುತ್ತದೆ. ಅದೂ ಅಲ್ಲದೆ ಈ ಭಾಗದ ರಸ್ತೆಯಲ್ಲಿ ಯಾವುದೇ ಖಾಸಗಿ ಟೆಂಪೊ, ಜೀಪು, ಕಮಾಂಡರುಗಳ ಓಡಾಟವಿರುವುದಿಲ್ಲ.
ಕಲ್ಮಡ್ಕ, ಅಮರಮೂಡ್ನುರು, ಮುಪ್ಪೇರ್ಯ ಗ್ರಾಮಗಳನ್ನು ಒಳಗೊಂಡ ನೂರಾರು ಜನರು ನಿತ್ಯ ಓಡಾಟ ನಡೆಸುವ ಈ ರಸ್ತೆಯಲ್ಲಿ ಸರ್ಕಾರಿ ಬಸ್ ಸೌಕರ್ಯದಿಂದ ವಂಚಿತವಾಗಿದೆ. ಕಲ್ಮಡದವರಿಗೆ ತಾಲೂಕು ಕೇಂದ್ರವಾದ ಸುಳ್ಯಕ್ಕೆ ಹೋಗಬೇಕಾದರೆ ಪಾಜಪಳ್ಳ ಮೂಲಕ ಬೆಳ್ಳಾರೆಗೆ ಬರಲೇಬೇಕು. ಸುಳ್ಯದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಿಗೆ, ನ್ಯಾಯಾಲಯಕ್ಕೆ ಬರಬೇಕಾದರೆ ಸುತ್ತು ಬಳಸಿ ಬರಬೇಕಾಗುತ್ತದೆ. ನೂರಾರು ವಿದ್ಯಾರ್ಥಿಗಳು ಬಸ್‍ಪಾಸ್ ಮಾಡಿಸಿಕೊಂಡರೂ ಬಸ್ ಇಲ್ಲದೆ ಅದು ನಿಷ್ಪ್ರಯೋಜಕವಾಗಿದೆ.

ಈ ರಸ್ತೆಯ ಮೂಲಕ ಸರಕಾರಿ ಬಸ್ ಸೌಲಭ್ಯಕ್ಕಾಗಿ ಹಲವು ಬಾರಿ ಶಾಸಕರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದರೂ ಇದುವರೆಗೂ ಪ್ರತಿಕ್ರಿಯೆ ದೊರೆತಿಲ್ಲವೆಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಡಿಪೋಗೆ ಮನವಿ ಬಂದಿಲ್ಲ. ಮನವಿ ಬಂದಲ್ಲಿ ಪರಿಶೀಲಿಸಿ ವಿಭಾಗೀಯ ಕಚೇರಿಗೆ ತಲುಪಿಸುತ್ತೇವೆ. ಇದು ಹೊಸ ರೂಟ್ ಆದ ಕಾರಣ ಬೇಡಿಕೆಯ ಕುರಿತು ಪರಿಶೀಲಿಸಬೇಕಿದೆ ಎಂದು ಹೇಳುತ್ತಾರೆ ಸುಳ್ಯ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್ ಸುಂದರ್‍ರಾಜ್.

ಸಮರ್ಪಕವಾದ ರಸ್ತೆಯಿದ್ದರೂ ಇಲ್ಲಿ ಬಸ್ ಓಡಾಟವಿಲ್ಲ. ದಿನದಲ್ಲಿ ಕನಿಷ್ಠ ಮೂರು ಬಾರಿಯಾದರೂ ಬಸ್ ಓಡಾಟ ನಡೆಸಿದರೆ ಸುಳ್ಯಕ್ಕೆ ಹೋಗುವವರಿಗೆ ಅನುಕೂಲವಾಗಬಹುದು ಎಂದು ಹೇಳುತ್ತಾರೆ ಕಲ್ಮಡ್ಕದ ಭಾಸ್ಕರ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

9 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

11 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

16 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

19 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

20 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago