ವಿಶೇಷ ವರದಿಗಳು

ಕಲ್ಮಡ್ಕ ರಸ್ತೆಯಲ್ಲಿ ಆಯ ತಪ್ಪಿದರೆ ಅಪಾಯ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಖಾಸಗಿ ಟೆಲಿಕಾಂ ಕಂಪೆನಿಯೊಂದು ಕಲ್ಮಡ್ಕ ಸಂಪರ್ಕಿಸುವ ಮುಖ್ಯ ರಸ್ತೆಯ ಬದಿಗಳೆರಡರಲ್ಲಿ ಗುಂಡಿಗಳನ್ನು ಅಗೆದ ಪರಿಣಾಮ ರಸ್ತೆಯು ಹಾಳಾಗಿದ್ದು, ವಾಹನ ಸವಾರರು ಸದಾ ಜೀವ ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಉಂಟಾಗಿದೆ.

Advertisement
Advertisement

ಕಲ್ಮಡ್ಕದಿಂದ ಕಾಪಡ್ಕದವರೆಗೆ ಖಾಸಗಿ ಕಂಪೆನಿಯೊಂದು ಜಿಲ್ಲಾ ಪಂಚಾಯತ್ ಇಜಿನಿಯರಿಂಗ್ ಇಲಾಖೆ ಅನುಮತಿ ಪಡೆದು ಕೇಬಲ್ ಅಳವಡಿಸಲು ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳನ್ನು ತೋಡಿಟ್ಟಿದೆ. ಈಗ ಮಳೆಗಾಲದ ಸಂದರ್ಭವಾಗಿದ್ದರೂ ಗುಂಡಿಗಳನ್ನು ಮುಚ್ಚದ ಕಾರಣ ಅವುಗಳಲ್ಲಿ ನೀರು ನಿಂತು ರಸ್ತೆಯ ಮೇಲೂ ಹರಿಯುತ್ತಿದೆ. ಇದರಿಂದ ಸಂಚಾರ ನಡೆಸುವುದೇ ನಿತ್ಯ ಸವಾರರ ದೈನಂದಿನ ಸಾಹಸವಾಗಿದೆ.

ಕಲ್ಮಡ್ಕ ಮುಖ್ಯ ರಸ್ತೆಯ ನಾಲ್ಕು ಮೋರಿಗಳಿಗೆ ಈ ಗುಂಡಿಗಳಿಂದ ಹಾನಿಯಾಗಿದ್ದು, ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಅಡಚಣೆಯಾಗಿದೆ. ಕುಲಾಯಿ ತೋಟದ ತಡೆಗೋಡೆಗೂ ಹಾನಿಯಾಗಿದೆ. ಸಾರ್ವಜನಿಕ ಮೋರಿಯನ್ನು ಹಾಳುಗೆಡವಿದ ಬಗ್ಗೆ ಕಲ್ಮಡ್ಕ ಗ್ರಾಮಸ್ಥರು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಸಭೆಯಲ್ಲಿಯೂ ಪ್ರಸ್ತಾಪಿಸಲಾಗಿತ್ತು:ಕಲ್ಮಡ್ಕ ರಸ್ತೆ ಹೊಂಡಗಳಿಂದ ಕೂಡಿದ್ದು ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ.ಈ ಮಧ್ಯೆ ಮೊಬೈಲ್ ನೆಟ್ವರ್ಕ್ ಕಂಪೆನಿಯೊಂದು ಅಗೆದಿರುವ ಗುಂಡಿಗಳಿಂದ ರಸ್ತೆಯ ಸ್ಥಿತಿ ಮತ್ತಷ್ಟು ದುಸ್ತರಗೊಂಡಿದೆ ಎಂದು ಗ್ರಾಮಸ್ಥರು ಕಳೆದ ವಾರ ಪಡ್ಪಿನಂಗಡಿಯಲ್ಲಿ ನಡೆದ ಕಲ್ಮಡ್ಕ ಗ್ರಾಮ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ರಸ್ತೆಯ ಮೇಲೆ ಷರಂಡಿ ನೀರು ಹರಿಯುತ್ತಿದ್ದು, ಹಾನಿಗೊಳಗಾದ ಮೋರಿಗಳನ್ನು ಹಾಗು ಶೀಘ್ರ ದುರಸ್ಥಿಗೊಳಿಸಬೇಕೆಂದು ಆಗ್ರಹಿಸಿದ್ದರು.

700 ಮೀ.ರಸ್ತೆ ಸಂಪೂರ್ಣ ಹಾಳಾಗಿದೆ:
ದುರಸ್ಥಿಯಾಗಿದ್ದಾಗ ಮರು ಡಾಮರೀಕರಣವಾಗಿದ್ದ ಕಲ್ಮಡ್ಕ ರಸ್ತೆಯ ಸುಮಾರು 700ಮೀ. ಭಾಗ ಹಾಳಾಗಿ ಹೋಗಿದೆ. ಕಾನೂನು ಪ್ರಕಾರ ರಸ್ತೆಯ ಚರಂಡಿಯಿಂದ ದೂರದಲ್ಲಿ ಗುಂಡಿ ಅಗೆಯಬೇಕಿತ್ತು. ಆದರೆ ಜೆಸಿಬಿ ಮೂಲಕ ರಸ್ತೆ ಬದಿಯಲ್ಲೆ ಗುಂಡಿ ಅಗೆದು ಮಣ್ಣನ್ನು ಚರಂಡಿಗೆ ಹಾಕಿರುವುದೇ ಇದಕ್ಕೆ ಕಾರಣವೆಂದು ಸ್ಥಳೀಯರು ದೂರುತ್ತಿದ್ದಾರೆ.

Advertisement

 

ರಸ್ತೆಯ ಬದಿಯೇ ಗುಂಡಿ ತೆಗೆದು ಚರಂಡಿಗೆ ಮಣ್ಣು ಹಾಕಿದ ಕಾರಣ ರಸ್ತೆಯೆಲ್ಲ ಹಾಳಾಗಿ ಹೋಗಿದೆ. ದ್ವಿಚಕ್ರ ವಾಹನ ಸವಾರರು ಸಹಿತ ಎಲ್ಲರಿಗೂ ಈ ಮಾರ್ಗದಲ್ಲಿ ಸಂಚರಿಸಲು ತೊಂದರೆ ಹಾಗು ಭಯವಾಗುತ್ತಿದೆ. ಚರಂಡಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸಿ, ರಸ್ತೆ ಹಾಗು ಮೋರಿಯನ್ನು ಶೀಘ್ರ ದುರಸ್ತಿಗೊಳಿಸಿ- 
ಜಯರಾಜ್ ನಡ್ಕ, ಗ್ರಾಮಸ್ಥ

ಗುಂಡಿ ಮುಚ್ಚಲು ಕ್ರಮಕೈಗೊಳ್ಳಲಾಗಿದೆ. ಕಳೆದ 5-6 ದಿನಗಳಿಂದ ರಸ್ತೆಯನ್ನು ಸರಿಪಡಿಸುವ ಕಾರ್ಯವನ್ನು ಜಿ.ಪಂ ಎಂಜಿನಿಯರ್ ಇಲಾಖೆಯಿಂದ ಮಾಡಿದ್ದೇವೆ. ಮಳೆಯ ಕಾರಣದಿಂದ ರಸ್ತೆಯು ಕೆಸರುಮಯವಾಗಿದೆ. ಜಿಯೋ ಸಂಸ್ಥೆಯವರಿಗೆ ಬೇಸಿಗೆಯಲ್ಲಿ ಕಾಮಗಾರಿ ನಡೆಸಲು ಅನುಮತಿ ನೀಡಲಾಗಿತ್ತು. ಮಳೆಗಾಲದಲ್ಲಿ ಕಾಮಗಾರಿ ನಡೆಸಿದ ಪರಿಣಾಮ ಒಂದೆರಡು ಕಡೆ ರಸ್ತೆಹಾಳಾಗಿದೆ – ಹನುಮಂತರಾಯಪ್ಪ, ಜಿ.ಪಂ ಎಂಜಿನಿಯರಿಂಗ್ ಉಪವಿಭಾಗ ಸುಳ್ಯ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

9 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

17 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

23 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago