Advertisement
ಕಾರ್ಯಕ್ರಮಗಳು

ಕಲ್ಮಡ್ಕ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂಭ್ರಮ ಹಾಗು 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ

Share

ಸುಳ್ಯ: ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಮತ್ತು ಸಂಘದ ಸೋಲಾರ್ ಅಳವಡಿಕೆಯನ್ನು ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಶಾಸಕ ಎಸ್‌.ಅಂಗಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಉದ್ಘಾಟಿಸಿದರು. ಕೃಷಿ ವಸ್ತು ಪ್ರದರ್ಶನವನ್ನು ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಇಂಟರ್ ಲಾಕ್ ಆಳವಡಿಕೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಕೆ.ಎಸ್. ದೇವರಾಜ್, ಜಿ.ಪಂ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ತಾ.ಪಂ ಸದಸ್ಯ ಅಬ್ದುಲ್ ಗಫೂರ್, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಜಿಲ್ಲಾಧ್ಯಕ್ಷ ಪಿ.ಬಿ.ದಿವಾಕರ ರೈ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್.ಬಿ.ನಾಯಕ್, ಕಲ್ಮಡ್ಕ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಉಡುವೆಕೋಡಿ ಸುಬ್ಬಪ್ಪಯ್ಯ, ಜಾಕೆ ಮಾಧವ ಗೌಡ, ಬಾಲಕೃಷ್ಣ ಗೌಡ ಮೂಲೆಮನೆ, ಕೆ.ಎಸ್‌.ಯಶೋಧಾ, ಮುಖ್ಯ ಅತಿಥಿಗಳಾಗಿದ್ದರು.

ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕ ಮಹೇಶ್.ಕೆ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾದ ಪಿ.ಸಿ.ಜಯರಾಮ, ರಾಜೀವಿ ಆರ್ ರೈ, ಕೆ.ಸಿ.ನಾರಾಯಣ ಗೌಡ, ಚಂದ್ರಶೇಖರ ಶಾಸ್ತ್ರಿ, ವಿಷ್ಣು ಭಟ್, ರಾಮಕೃಷ್ಣ ರೈ, ಮುಳಿಯ ಕೇಶವ ಭಟ್, ಸೋಮಶೇಖರ ಕೊಯಿಂಗಾಜೆ, ಮಹೇಶ್ ಕುಮಾರ್ ಕರಿಕ್ಕಳ, ಸಂತೋಷ್ ಕುತ್ತಮೊಟ್ಟೆ, ರವೀಂದ್ರ ರುದ್ರಪಾದ, ಕೃಪಾಶಂಕರ ತುದಿಯಡ್ಕ, ಗಂಗಾಧರ ರೈ ಪುಡ್ಕಜೆ, ಇಸ್ಮಾಯಿಲ್ ಕೆ.ಎಂ, ಗೌರವ ಅತಿಥಿಗಳಾಗಿದ್ದರು.
ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಉದಯ ಕುಮಾರ್ ಬೆಟ್ಟ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ.ಕೆ ವರದಿ ವಾಚಿಸಿದರು. ಉಪಾಧ್ಯಕ್ಷ ಎ.ಗಂಗಾಧರ ಗೌಡ, ನಿರ್ದೇಶಕರಾದ ಕೆ.ಶಂಕರನಾರಾಯಣ ಭಟ್, ಲಕ್ಷ್ಮೀನಾರಾಯಣ ನಡ್ಕ, ಮಹಾಬಲ.ಕೆ, ಸುಧಾ ಎಸ್.ಭಟ್, ಲಲಿತ.ಪಿ, ಮಹಮ್ಮದ್ ಹನೀಫ್, ರಾಮನಾಯ್ಕ.ಯು, ಕರುಣಾಕರ.ಜೆ, ಸಹಕಾರ ಸಂಘಗಳ ವಲಯ ಮೇಲ್ವಿಚಾರಕ ಪ್ರದೀಪ್ ಕೆ ಉಪಸ್ಥಿತರಿದ್ದರು.

ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಲ್ಮಡ್ಕ ಸಹಕಾರಿ ಸಂಘಗಳ ಪೂರ್ವಾಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago