Advertisement
ಕಾರ್ಯಕ್ರಮಗಳು

ಕಲ್ಮಡ್ಕ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ-ರಂಗಕರ್ಮಿ ಮಹಾಬಲ ಕಲ್ಮಡ್ಕರಿಗೆ ಸನ್ಮಾನ

Share

ಸುಳ್ಯ: ಮಹಾಬಲ ಕಲ್ಮಡ್ಕರು ಎಳೆಯ ವಯಸ್ಸಿನಲ್ಲಿಯೇ ಯಕ್ಷಗಾನ-ನಾಟಕ ಕಲಾವಿದರಾಗಿ, ಕಲಾಕೃತಿಗಳನ್ನು ರಚಿಸಿ, ವಿಶೇಷ ವಿದ್ಯಾರ್ಥಿಯಾಗಿ ಮೂಡಿಬಂದವರು. ವಸ್ತ್ರವಿನ್ಯಾಸ, ಧ್ವನಿ, ನಿರ್ದೇಶನ, ಸಂಗೀತ, ಬೆಳಕು ಪ್ರಸಾದಕರಾಗಿ ಬೆಳೆದು ಸಮಾಜಕ್ಕೆ ಅದನ್ನು ನೀಡಿದ್ದಾರೆ. ಈ ಕುರಿತು ವಿಶೇಷ ಅಧ್ಯಯನ, ಚಿಂತನೆಗಳನ್ನು ನಡೆಸಿ ದೇಶ-ವಿದೇಶದಲ್ಲಿ ಖ್ಯಾತಿಪಡೆದಿದ್ದಾರೆ. ಜತೆಯಲ್ಲಿ ಕಲಾಕೃತಿಯನ್ನು ರಚಿಸಿ ಸಾಕಷ್ಟು ಹೆಸರನ್ನು ಗಳಿಸಿ ಅದನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಪದ್ಮನಾಭ ಗೌಡ ಬಿಳಿಮಲೆ ಹೇಳಿದರು.

Advertisement
Advertisement

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ನಡೆದ ರಂಗಕರ್ಮಿ ಮಹಾಬಲ ಕಲ್ಮಡ್ಕ ಸನ್ಮಾನ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಹಾಗೂ ರಂಗಕರ್ಮಿ ಮಹಾಬಲ ಕಲ್ಮಡ್ಕರನ್ನು ಕಟೀಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಕಮಲಾದೇವಿಪ್ರಸಾದ್ ಅಸ್ರಣ್ಣ ಸನ್ಮಾನಿಸಿದರು. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಕೆ.ನಾರಾಯಣ ಚಳ್ಳಂಗಾರು ಅಧ್ಯಕ್ಷತೆ ವಹಿಸಿದ್ದರು. ಲೇಖಕ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ.ರಾಮಕುಂಜ, ಲೇಖಕ ನಾ.ಕಾರಂತ ಪೆರಾಜೆ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ, ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅತಿಥಿಗಳಾಗಿದ್ದರು. ಕಲ್ಮಡ್ಕ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ,ಉಪಸ್ಥಿತರಿದ್ದರು.
ವೆಂಕಟ ಸುಬ್ಬಪಯ್ಯ ಸ್ವಾಗತಿಸಿ, ಸಚಿನ್ ವಂದಿಸಿದರು.ಶಿವರಾಮ ಬಿ. ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

1 hour ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

23 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

23 hours ago