Advertisement
ಕಾರ್ಯಕ್ರಮಗಳು

ಕಲ್ಮಡ್ಕ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ-ರಂಗಕರ್ಮಿ ಮಹಾಬಲ ಕಲ್ಮಡ್ಕರಿಗೆ ಸನ್ಮಾನ

Share

ಸುಳ್ಯ: ಮಹಾಬಲ ಕಲ್ಮಡ್ಕರು ಎಳೆಯ ವಯಸ್ಸಿನಲ್ಲಿಯೇ ಯಕ್ಷಗಾನ-ನಾಟಕ ಕಲಾವಿದರಾಗಿ, ಕಲಾಕೃತಿಗಳನ್ನು ರಚಿಸಿ, ವಿಶೇಷ ವಿದ್ಯಾರ್ಥಿಯಾಗಿ ಮೂಡಿಬಂದವರು. ವಸ್ತ್ರವಿನ್ಯಾಸ, ಧ್ವನಿ, ನಿರ್ದೇಶನ, ಸಂಗೀತ, ಬೆಳಕು ಪ್ರಸಾದಕರಾಗಿ ಬೆಳೆದು ಸಮಾಜಕ್ಕೆ ಅದನ್ನು ನೀಡಿದ್ದಾರೆ. ಈ ಕುರಿತು ವಿಶೇಷ ಅಧ್ಯಯನ, ಚಿಂತನೆಗಳನ್ನು ನಡೆಸಿ ದೇಶ-ವಿದೇಶದಲ್ಲಿ ಖ್ಯಾತಿಪಡೆದಿದ್ದಾರೆ. ಜತೆಯಲ್ಲಿ ಕಲಾಕೃತಿಯನ್ನು ರಚಿಸಿ ಸಾಕಷ್ಟು ಹೆಸರನ್ನು ಗಳಿಸಿ ಅದನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಪದ್ಮನಾಭ ಗೌಡ ಬಿಳಿಮಲೆ ಹೇಳಿದರು.

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ನಡೆದ ರಂಗಕರ್ಮಿ ಮಹಾಬಲ ಕಲ್ಮಡ್ಕ ಸನ್ಮಾನ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಹಾಗೂ ರಂಗಕರ್ಮಿ ಮಹಾಬಲ ಕಲ್ಮಡ್ಕರನ್ನು ಕಟೀಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಕಮಲಾದೇವಿಪ್ರಸಾದ್ ಅಸ್ರಣ್ಣ ಸನ್ಮಾನಿಸಿದರು. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಕೆ.ನಾರಾಯಣ ಚಳ್ಳಂಗಾರು ಅಧ್ಯಕ್ಷತೆ ವಹಿಸಿದ್ದರು. ಲೇಖಕ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ.ರಾಮಕುಂಜ, ಲೇಖಕ ನಾ.ಕಾರಂತ ಪೆರಾಜೆ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ, ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅತಿಥಿಗಳಾಗಿದ್ದರು. ಕಲ್ಮಡ್ಕ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ,ಉಪಸ್ಥಿತರಿದ್ದರು.
ವೆಂಕಟ ಸುಬ್ಬಪಯ್ಯ ಸ್ವಾಗತಿಸಿ, ಸಚಿನ್ ವಂದಿಸಿದರು.ಶಿವರಾಮ ಬಿ. ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

5 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

10 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

10 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago