Advertisement
ಕಾರ್ಯಕ್ರಮಗಳು

ಕಲ್ಮಡ್ಕ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ-ರಂಗಕರ್ಮಿ ಮಹಾಬಲ ಕಲ್ಮಡ್ಕರಿಗೆ ಸನ್ಮಾನ

Share

ಸುಳ್ಯ: ಮಹಾಬಲ ಕಲ್ಮಡ್ಕರು ಎಳೆಯ ವಯಸ್ಸಿನಲ್ಲಿಯೇ ಯಕ್ಷಗಾನ-ನಾಟಕ ಕಲಾವಿದರಾಗಿ, ಕಲಾಕೃತಿಗಳನ್ನು ರಚಿಸಿ, ವಿಶೇಷ ವಿದ್ಯಾರ್ಥಿಯಾಗಿ ಮೂಡಿಬಂದವರು. ವಸ್ತ್ರವಿನ್ಯಾಸ, ಧ್ವನಿ, ನಿರ್ದೇಶನ, ಸಂಗೀತ, ಬೆಳಕು ಪ್ರಸಾದಕರಾಗಿ ಬೆಳೆದು ಸಮಾಜಕ್ಕೆ ಅದನ್ನು ನೀಡಿದ್ದಾರೆ. ಈ ಕುರಿತು ವಿಶೇಷ ಅಧ್ಯಯನ, ಚಿಂತನೆಗಳನ್ನು ನಡೆಸಿ ದೇಶ-ವಿದೇಶದಲ್ಲಿ ಖ್ಯಾತಿಪಡೆದಿದ್ದಾರೆ. ಜತೆಯಲ್ಲಿ ಕಲಾಕೃತಿಯನ್ನು ರಚಿಸಿ ಸಾಕಷ್ಟು ಹೆಸರನ್ನು ಗಳಿಸಿ ಅದನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಪದ್ಮನಾಭ ಗೌಡ ಬಿಳಿಮಲೆ ಹೇಳಿದರು.

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವದ ಅಂಗವಾಗಿ ನಡೆದ ರಂಗಕರ್ಮಿ ಮಹಾಬಲ ಕಲ್ಮಡ್ಕ ಸನ್ಮಾನ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಹಾಗೂ ರಂಗಕರ್ಮಿ ಮಹಾಬಲ ಕಲ್ಮಡ್ಕರನ್ನು ಕಟೀಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಕಮಲಾದೇವಿಪ್ರಸಾದ್ ಅಸ್ರಣ್ಣ ಸನ್ಮಾನಿಸಿದರು. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಕೆ.ನಾರಾಯಣ ಚಳ್ಳಂಗಾರು ಅಧ್ಯಕ್ಷತೆ ವಹಿಸಿದ್ದರು. ಲೇಖಕ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ.ರಾಮಕುಂಜ, ಲೇಖಕ ನಾ.ಕಾರಂತ ಪೆರಾಜೆ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ, ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅತಿಥಿಗಳಾಗಿದ್ದರು. ಕಲ್ಮಡ್ಕ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ,ಉಪಸ್ಥಿತರಿದ್ದರು.
ವೆಂಕಟ ಸುಬ್ಬಪಯ್ಯ ಸ್ವಾಗತಿಸಿ, ಸಚಿನ್ ವಂದಿಸಿದರು.ಶಿವರಾಮ ಬಿ. ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

48 minutes ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

3 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

4 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

7 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

8 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

11 hours ago