Advertisement
ಕಾರ್ಯಕ್ರಮಗಳು

ಕಲ್ಲಪಳ್ಳಿಯಲ್ಲಿ ಆದರ್ಶ ಸಭಾಭವನ ಉದ್ಘಾಟನೆ- ಉಪನ್ಯಾಸ, ಸಾಧಕರಿಗೆ ಗೌರವಾರ್ಪಣೆ

Share

ಸುಳ್ಯ: ಕಲ್ಲಪಳ್ಳಿಯ ಪೆರುಮುಂಡ ಆದರ್ಶ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ನೂತನ ಆದರ್ಶ ಸಭಾಭವನ ಉದ್ಘಾಟನೆಯು ಡಿ. 8ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹೋಮದ ಬಳಿಕ ಸಭಾಭವನದ ಉದ್ಘಾಟನೆ ನಡೆಯಿತು. ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ. ಉದ್ಘಾಟನೆ ನೆರವೇರಿಸಿದರು. ಕಲ್ಲಪಳ್ಳಿ ಕೂಟುಪಿಲಾವು ಶ್ರೀ ವಿಷ್ಣುಮೂರ್ತಿ ಸೇವಾ ಸಂಘದ ಅಧ್ಯಕ್ಷ ಎ.ಕೆ. ಸೋಮನಾಥ ಗೌಡ ಆಲುಗುಂಜ, ಅಯ್ಯಪ್ಪ ಸೇವಾ ಸಮಿತಿಯ ಬಿ.ಕೆ. ಜನಾರ್ದನ ಗುಂಡ್ಯ, ಪ್ರಗತಿಪರ ಕೃಷಿಕ ಬಿ.ಕೆ. ನಾರಾಯಣ ಪೆರುಮುಂಡ ಉಪಸ್ಥಿತರಿದ್ದರು.

Advertisement

ಉಪನ್ಯಾಸ, ಸನ್ಮಾನ: ಉದ್ಘಟನಾ ಸಮಾರಂಭದ ಅಂಗವಾಗಿ ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ಉಪನ್ಯಾಸ ನೀಡಿದರು. ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ., ಪತ್ರಕರ್ತ ಗಂಗಾಧರ ಕಲ್ಲಪಳ್ಳಿ, ಮೋಹನ್‌ಚಂದ್ರ ನಡುಬೆಟ್ಟು ಅವರನ್ನು ಸನ್ಮಾನಿಸಲಾಯಿತು.

Advertisement

ಆದರ್ಶ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರಾಜೇಶ್ ಪಿ.ಎ. ಅಧ್ಯಕ್ಷತೆ ವಹಿಸಿದ್ದರು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್‌ಕುಮಾರ್ ರೈ, ಪನತ್ತಡಿ ಗ್ರಾ.ಪಂ. ಸದಸ್ಯೆ ನಳಿನಾಕ್ಷಿ ದಾಮೋದರ ಪನೆಯಾಲ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಲ್ಲಪಳ್ಳಿ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಿ.ಎ ಮುಖ್ಯ ಅತಿಥಿಗಳಾಗಿದ್ದರು. ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಜಗದೀಶ ಪಿ.ವಿ., ಆದರ್ಶ ಮಹಿಳಾ ಸಂಘದ ಅಧ್ಯಕ್ಷೆ ಸಾವಿತ್ರಿ ದಾಸಪ್ಪ ಪೆರುಮುಂಡ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳಾದ ರವಿಕುಮಾರ್ ಸ್ವಾಗತಿಸಿ, ರಮೇಶ್ ಪೆರುಮುಂಡ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ಪೆರುಮುಂಡ ವಂದಿಸಿದರು.

ಉದ್ಘಾಟನೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಂಪಾಜೆ ವಲಯ ಹಾಗೂ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಕಲ್ಲಪಳ್ಳಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿತು. ಶ್ರೀ ಮಾತಾ ಅಮೃತಾನಂದಮಯಿ ಸ್ವಸಹಾಯ ಸಂಘ ಮತ್ತು ಆದರ್ಶ ಮತ್ತು ಅಮ್ಮ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago