Advertisement
ಕಾರ್ಯಕ್ರಮಗಳು

ಕಲ್ಲಪಳ್ಳಿಯಲ್ಲಿ ಆದರ್ಶ ಸಭಾಭವನ ಉದ್ಘಾಟನೆ- ಉಪನ್ಯಾಸ, ಸಾಧಕರಿಗೆ ಗೌರವಾರ್ಪಣೆ

Share

ಸುಳ್ಯ: ಕಲ್ಲಪಳ್ಳಿಯ ಪೆರುಮುಂಡ ಆದರ್ಶ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ನೂತನ ಆದರ್ಶ ಸಭಾಭವನ ಉದ್ಘಾಟನೆಯು ಡಿ. 8ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹೋಮದ ಬಳಿಕ ಸಭಾಭವನದ ಉದ್ಘಾಟನೆ ನಡೆಯಿತು. ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ. ಉದ್ಘಾಟನೆ ನೆರವೇರಿಸಿದರು. ಕಲ್ಲಪಳ್ಳಿ ಕೂಟುಪಿಲಾವು ಶ್ರೀ ವಿಷ್ಣುಮೂರ್ತಿ ಸೇವಾ ಸಂಘದ ಅಧ್ಯಕ್ಷ ಎ.ಕೆ. ಸೋಮನಾಥ ಗೌಡ ಆಲುಗುಂಜ, ಅಯ್ಯಪ್ಪ ಸೇವಾ ಸಮಿತಿಯ ಬಿ.ಕೆ. ಜನಾರ್ದನ ಗುಂಡ್ಯ, ಪ್ರಗತಿಪರ ಕೃಷಿಕ ಬಿ.ಕೆ. ನಾರಾಯಣ ಪೆರುಮುಂಡ ಉಪಸ್ಥಿತರಿದ್ದರು.

ಉಪನ್ಯಾಸ, ಸನ್ಮಾನ: ಉದ್ಘಟನಾ ಸಮಾರಂಭದ ಅಂಗವಾಗಿ ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ಉಪನ್ಯಾಸ ನೀಡಿದರು. ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ., ಪತ್ರಕರ್ತ ಗಂಗಾಧರ ಕಲ್ಲಪಳ್ಳಿ, ಮೋಹನ್‌ಚಂದ್ರ ನಡುಬೆಟ್ಟು ಅವರನ್ನು ಸನ್ಮಾನಿಸಲಾಯಿತು.

ಆದರ್ಶ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರಾಜೇಶ್ ಪಿ.ಎ. ಅಧ್ಯಕ್ಷತೆ ವಹಿಸಿದ್ದರು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್‌ಕುಮಾರ್ ರೈ, ಪನತ್ತಡಿ ಗ್ರಾ.ಪಂ. ಸದಸ್ಯೆ ನಳಿನಾಕ್ಷಿ ದಾಮೋದರ ಪನೆಯಾಲ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಲ್ಲಪಳ್ಳಿ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಿ.ಎ ಮುಖ್ಯ ಅತಿಥಿಗಳಾಗಿದ್ದರು. ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಜಗದೀಶ ಪಿ.ವಿ., ಆದರ್ಶ ಮಹಿಳಾ ಸಂಘದ ಅಧ್ಯಕ್ಷೆ ಸಾವಿತ್ರಿ ದಾಸಪ್ಪ ಪೆರುಮುಂಡ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳಾದ ರವಿಕುಮಾರ್ ಸ್ವಾಗತಿಸಿ, ರಮೇಶ್ ಪೆರುಮುಂಡ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ಪೆರುಮುಂಡ ವಂದಿಸಿದರು.

ಉದ್ಘಾಟನೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಂಪಾಜೆ ವಲಯ ಹಾಗೂ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಕಲ್ಲಪಳ್ಳಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿತು. ಶ್ರೀ ಮಾತಾ ಅಮೃತಾನಂದಮಯಿ ಸ್ವಸಹಾಯ ಸಂಘ ಮತ್ತು ಆದರ್ಶ ಮತ್ತು ಅಮ್ಮ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

56 minutes ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

8 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

8 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

17 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

18 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago