ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಅವರು ದೇವರ ವಾಕ್ಯವನ್ನು ಬೋಧಿಸಿ, “ಯೇಸುವಿನ ಪುನರುತ್ಧಾನ ನಮ್ಮ ಬದುಕಿಗೆ ಭರವಸೆಯ ಬುನಾದಿ, ಕಷ್ಟ-ನಷ್ಟಗಳಿಗೆ, ಸಾಂತ್ವಾನ ಹಾಗೂ ಅವಕಾಶದಿಂದ ಕೂಡಿದ ಬದುಕಿಗೆ ಬೆಳಕು” ಎಂದರು.
ಕಲ್ಲುಗುಂಡಿ ಸಂಪಾಜೆ ಚರ್ಚ್ನ ಧರ್ಮಗುರುಗಳಾದ ಫಾ| ನವೀನ್ ಪ್ರಕಾಶ್ ಪಿಂಟೋ ಉಪಸ್ಥಿತರಿದ್ದರು. ಬಲಿಪೂಜೆಯ ನಂತರ ಪೂಜ್ಯರನ್ನು ಸನ್ಮಾನಿಸಲಾಯಿತು. ಬಳಿಕ ಧರ್ಮಾಧ್ಯಕ್ಷ ಚರ್ಚ್ನ ಅಧೀನದಲ್ಲಿರುವ ವಿದ್ಯಾ ಸಂಸ್ಥೆಗೆ ಸೇರಿದ ನೂತನ ಶಾಲಾ ವಾಹನವನ್ನು ಆಶೀರ್ವದಿಸಿ, ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…