ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಅವರು ದೇವರ ವಾಕ್ಯವನ್ನು ಬೋಧಿಸಿ, “ಯೇಸುವಿನ ಪುನರುತ್ಧಾನ ನಮ್ಮ ಬದುಕಿಗೆ ಭರವಸೆಯ ಬುನಾದಿ, ಕಷ್ಟ-ನಷ್ಟಗಳಿಗೆ, ಸಾಂತ್ವಾನ ಹಾಗೂ ಅವಕಾಶದಿಂದ ಕೂಡಿದ ಬದುಕಿಗೆ ಬೆಳಕು” ಎಂದರು.
ಕಲ್ಲುಗುಂಡಿ ಸಂಪಾಜೆ ಚರ್ಚ್ನ ಧರ್ಮಗುರುಗಳಾದ ಫಾ| ನವೀನ್ ಪ್ರಕಾಶ್ ಪಿಂಟೋ ಉಪಸ್ಥಿತರಿದ್ದರು. ಬಲಿಪೂಜೆಯ ನಂತರ ಪೂಜ್ಯರನ್ನು ಸನ್ಮಾನಿಸಲಾಯಿತು. ಬಳಿಕ ಧರ್ಮಾಧ್ಯಕ್ಷ ಚರ್ಚ್ನ ಅಧೀನದಲ್ಲಿರುವ ವಿದ್ಯಾ ಸಂಸ್ಥೆಗೆ ಸೇರಿದ ನೂತನ ಶಾಲಾ ವಾಹನವನ್ನು ಆಶೀರ್ವದಿಸಿ, ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…