ಕಳಂಜ : ಕಳಂಜ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…