ಕಳಂಜ : ಕಳಂಜ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…
ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…