ಕಳಂಜ : ಕಳಂಜ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…