ಕಳಂಜ : ಕಳಂಜ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…