Advertisement
ಸುದ್ದಿಗಳು

ಕಳಂಜ ಗ್ರಾಮ ಪಂಚಾಯತ್ ಜಮಾಬಂದಿ

Share

ಕಳಂಜ : ಕಳಂಜ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್‍ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

37 minutes ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

51 minutes ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

3 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

8 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago