ಕಳಂಜ : ಕಳಂಜ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…