Advertisement
ಸುದ್ದಿಗಳು

ಕಳಂಜ ಗ್ರಾಮ ಪಂಚಾಯತ್ ಜಮಾಬಂದಿ

Share

ಕಳಂಜ : ಕಳಂಜ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್‍ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

19 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

21 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

22 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago