ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…