ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…