ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…