ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…