ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…