ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು.
ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್ ಅಭಿವೃದ್ದಿ ಅಧಿಕಾರಿ ತ್ಯಾಜ್ಯವನ್ನು ಬೆಂಕಿ ಹಾಕಿ ಸುಡಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಶುಚಿ ಹಾಗೂ ವಿಂಗಡಿಸಿ ಸಂಗ್ರಹಿಸಿಟ್ಟು ನಂತರ ಪಂಚಾಯತ್ ಗೆ ತೆಗೆದುಕೊಂಡು ಹೋಗಲು ಕರೆಮಾಡಿ ತಿಳಿಸಬೇಕು ಎಂದರು. ಅದರೊಂದಿಗೆ ಷರತ್ತು ತಪ್ಪಿ ಅವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಕಾನೂನು ಪ್ರಕಾರ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಯೊಂದು ಅಂಗಡಿಗೂ ಶುಚಿತ್ವ ನಿರ್ವಹಣೆ ಕುರಿತು ಪಂಚಾಯತ್ ವತಿಯಿಂದ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ, ಉಪಾಧ್ಯಕ್ಷ ಹಾಗು ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…