ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.
ಕಳಂಜ ಗ್ರಾಮ ಪಂಚಾಯತ್ 2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.
ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…