ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.
ಕಳಂಜ ಗ್ರಾಮ ಪಂಚಾಯತ್ 2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.
ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…