ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.
ಕಳಂಜ ಗ್ರಾಮ ಪಂಚಾಯತ್ 2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.
ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…