ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.
ಕಳಂಜ ಗ್ರಾಮ ಪಂಚಾಯತ್ 2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.
ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…