ಬೆಳ್ಳಾರೆ: ಕಳಂಜ ಗ್ರಾಮ ಪಂಚಾಯತ್ ನ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಸಂಯೋಜನಾಧಿಕಾರಿ ರೋಹಿತ್ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಅತೀ ದೊಡ್ಡ ಯೋಜನೆ ಇದಾಗಿದೆ. ನರೇಗಾ ಯೋಜನೆಯ ಫಲವನ್ನು ಗರಿಷ್ಠ ಮಟ್ಟದಲ್ಲಿ ಗ್ರಾಮದ ಜನರು ಬಳಸಿಕೊಳ್ಳಬೇಕು ಎಂದರು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಮಾಹಿತಿ ನೀಡುತ್ತಾ 2019-20ನೇ ಸಾಲಿನಲ್ಲಿ ಸರಕಾರದಿಂದ ದೊರೆಯುವ ಅನುದಾನದ ಪಟ್ಟಿ ವಾಚಿಸುತ್ತಾ ಬಾವಿ ನಿರ್ಮಾಣಕ್ಕೆ 1 ಲಕ್ಷದ 28 ಸಾವಿರ ರೂಪಾಯಿ, ಜಲಮರುಪೂರಣ ಘಟಕ ನಿರ್ಮಾಣಕ್ಕೆ 22 ಸಾವಿರ ರೂಪಾಯಿ, ದನದ ಹಟ್ಟಿ ನಿರ್ಮಾಣಕ್ಕೆ 23 ಸಾವಿರ ರೂಪಾಯಿ, ಕೃಷಿಹೊಂಡ ನಿರ್ಮಾಣಕ್ಕೆ 85ಸಾವಿರ ರೂಪಾಯಿ, ಆಡು ಮತ್ತು ಕುರಿ ಶೆಡ್ ನಿರ್ಮಾಣಕ್ಕೆ 19600 ರೂಪಾಯಿ, ಕೋಳಿ ಶೆಡ್ ನಿರ್ಮಾಣಕ್ಕೆ 50 ಸಾವಿರ ರೂಪಾಯಿ, ಶೌಚಾಲಯ ನಿರ್ಮಾಣಕ್ಕೆ 12 ಸಾವಿರ ರೂಪಾಯಿ ದೊರೆಯವುದೆಂದು ಹೇಳಿದರು.
ತೋಟಗಾರಿಕಾ ತಾಂತ್ರಿಕ ಸಹಾಯಕಿ ನಿಶಾ ಮಾಹಿತಿ ನೀಡುತ್ತಾ ಅಡಿಕೆ ಪುನಶ್ಚೇತನಕ್ಕೆ ಹಾಗು ಬಾಳೆಕೃಷಿಗೆ ಇಲಾಖೆಯಿಂದ ಸಹಕಾರವಿದೆ ಎಂದರು. ಅಡಿಕೆ ಒಂದು ಗುಂಡಿ 2.30 ಫೀಟು ಉದ್ದ ಅಗಲ ಇದ್ದರೆ 310 ರೂಪಾಯಿಗಳಂತೆ, 3ಫೀಟು ಉದ್ದ ಮತ್ತು ಅಗಲದ ತೆಂಗು ಗುಂಡಿಯೊಂದಕ್ಕೆ 310 ರೂಪಾಯಿಗಳಂತೆ, 1.30 ಫೀಟು ಆಳದ ಕಾಳು ಮೆಣಸು ಗುಂಡಿಗೆ 50ರೂಪಾಯಿ, ವೀಳ್ಯದೆಲೆಗೆ 40ರೂಪಾಯಿ, ಗೇರು ಕೃಷಿಯಲ್ಲಿ 3ಫೀಟು ಉದ್ದ ಮತ್ತು ಅಗಲದ ಗುಂಡಿಯೊಂದಕ್ಕೆ 70ರೂಪಾಯಿಯಂತೆ ಇಲಾಖೆಯಿಂದ ನೀಡಲಾಗುವುದು ಎಂದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ .ಎಂ, ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ.ಕೆ ಉಪಸ್ಥಿತರಿದ್ದರು.
ಪಿಡಿಒ ಶ್ರೀಧರ್ ಕೆ.ಆರ್ ಸ್ವಾಗತಿಸಿ ವಂದಿಸಿದರು. ದಿವ್ಯ ವರದಿ ವಾಚಿಸಿದರು. ಜಯರಾಮ್ ನಿರೂಪಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…