Advertisement
ಸುದ್ದಿಗಳು

ಕಳಂಜ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ

Share

ಬೆಳ್ಳಾರೆ: ಕಳಂಜ ಗ್ರಾಮ ಪಂಚಾಯತ್ ನ  2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಸಂಯೋಜನಾಧಿಕಾರಿ ರೋಹಿತ್ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಅತೀ ದೊಡ್ಡ ಯೋಜನೆ ಇದಾಗಿದೆ. ನರೇಗಾ ಯೋಜನೆಯ ಫಲವನ್ನು ಗರಿಷ್ಠ ಮಟ್ಟದಲ್ಲಿ ಗ್ರಾಮದ ಜನರು ಬಳಸಿಕೊಳ್ಳಬೇಕು ಎಂದರು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಮಾಹಿತಿ ನೀಡುತ್ತಾ 2019-20ನೇ ಸಾಲಿನಲ್ಲಿ ಸರಕಾರದಿಂದ ದೊರೆಯುವ ಅನುದಾನದ ಪಟ್ಟಿ ವಾಚಿಸುತ್ತಾ ಬಾವಿ ನಿರ್ಮಾಣಕ್ಕೆ 1 ಲಕ್ಷದ 28 ಸಾವಿರ ರೂಪಾಯಿ, ಜಲಮರುಪೂರಣ ಘಟಕ ನಿರ್ಮಾಣಕ್ಕೆ 22 ಸಾವಿರ ರೂಪಾಯಿ, ದನದ ಹಟ್ಟಿ ನಿರ್ಮಾಣಕ್ಕೆ 23 ಸಾವಿರ ರೂಪಾಯಿ, ಕೃಷಿಹೊಂಡ ನಿರ್ಮಾಣಕ್ಕೆ 85ಸಾವಿರ ರೂಪಾಯಿ, ಆಡು ಮತ್ತು ಕುರಿ ಶೆಡ್ ನಿರ್ಮಾಣಕ್ಕೆ 19600 ರೂಪಾಯಿ, ಕೋಳಿ ಶೆಡ್ ನಿರ್ಮಾಣಕ್ಕೆ 50 ಸಾವಿರ ರೂಪಾಯಿ, ಶೌಚಾಲಯ ನಿರ್ಮಾಣಕ್ಕೆ 12 ಸಾವಿರ ರೂಪಾಯಿ ದೊರೆಯವುದೆಂದು ಹೇಳಿದರು.
ತೋಟಗಾರಿಕಾ ತಾಂತ್ರಿಕ ಸಹಾಯಕಿ ನಿಶಾ ಮಾಹಿತಿ ನೀಡುತ್ತಾ ಅಡಿಕೆ ಪುನಶ್ಚೇತನಕ್ಕೆ ಹಾಗು ಬಾಳೆಕೃಷಿಗೆ ಇಲಾಖೆಯಿಂದ ಸಹಕಾರವಿದೆ ಎಂದರು. ಅಡಿಕೆ ಒಂದು ಗುಂಡಿ 2.30 ಫೀಟು ಉದ್ದ ಅಗಲ ಇದ್ದರೆ 310 ರೂಪಾಯಿಗಳಂತೆ, 3ಫೀಟು ಉದ್ದ ಮತ್ತು ಅಗಲದ ತೆಂಗು ಗುಂಡಿಯೊಂದಕ್ಕೆ 310 ರೂಪಾಯಿಗಳಂತೆ, 1.30 ಫೀಟು ಆಳದ ಕಾಳು ಮೆಣಸು ಗುಂಡಿಗೆ 50ರೂಪಾಯಿ, ವೀಳ್ಯದೆಲೆಗೆ 40ರೂಪಾಯಿ, ಗೇರು ಕೃಷಿಯಲ್ಲಿ 3ಫೀಟು ಉದ್ದ ಮತ್ತು ಅಗಲದ ಗುಂಡಿಯೊಂದಕ್ಕೆ 70ರೂಪಾಯಿಯಂತೆ ಇಲಾಖೆಯಿಂದ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ .ಎಂ, ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ.ಕೆ ಉಪಸ್ಥಿತರಿದ್ದರು.

Advertisement

ಪಿಡಿಒ ಶ್ರೀಧರ್ ಕೆ.ಆರ್ ಸ್ವಾಗತಿಸಿ ವಂದಿಸಿದರು. ದಿವ್ಯ ವರದಿ ವಾಚಿಸಿದರು. ಜಯರಾಮ್ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago