Advertisement
ರಾಷ್ಟ್ರೀಯ

ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದು ತಡೆಗೆ ಸಂಸದ ನಳಿನ್ ಒತ್ತಾಯ

Share

ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ.

ಬುಧವಾರದಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಧ್ವನಿ ಎತ್ತಿದ ಸಂಸದ ನಳಿನ್ ಕುಮಾರ್ ಕಟೀಲು, ಅಡಿಕೆ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಂಸದರು ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಇವೆ.  ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿರೋಗಳಗಳಂತಹ  ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು ರೂ.5,000 ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದರು. ಆದುದರಿಂದ ಕೇಂದ್ರ ಸರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

8 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

17 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

17 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

17 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago