Advertisement
ರಾಷ್ಟ್ರೀಯ

ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದು ತಡೆಗೆ ಸಂಸದ ನಳಿನ್ ಒತ್ತಾಯ

Share

ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ.

ಬುಧವಾರದಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಧ್ವನಿ ಎತ್ತಿದ ಸಂಸದ ನಳಿನ್ ಕುಮಾರ್ ಕಟೀಲು, ಅಡಿಕೆ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಂಸದರು ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಇವೆ.  ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿರೋಗಳಗಳಂತಹ  ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು ರೂ.5,000 ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದರು. ಆದುದರಿಂದ ಕೇಂದ್ರ ಸರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

37 minutes ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

8 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

15 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

16 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

17 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

23 hours ago