ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…