ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||
ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||
ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||
ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||
ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…