ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||
ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||
ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||
ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||
ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…