ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||
ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||
ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||
ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||
ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…