ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||
ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||
ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||
ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||
ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…