ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||
ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||
ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||
ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||
ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…