ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…