ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…