ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…