ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…