ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…