ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…