ಸುಳ್ಯ: ಸರಳಿಕುಂಜದಲ್ಲಿರುವ ಧರ್ಮಾರಣ್ಯದ ಗುರುಗಣಪತಿ ಸಭಾಭವನದಲ್ಲಿ ಭಾನುವಾರ ಸುಳ್ಯ ಹವ್ಯಕ ವಲಯ ದ ವತಿಯಿಂದ ಸಂಧ್ಯಾ ಕುಮಾರ್ ಉಬರಡ್ಕ ಅವರ ಸ್ವರಚಿತ ಕವನ ಸಂಕಲನ ‘ಉಷಾಕಿರಣ’ದ ಬಿಡುಗಡೆ ಸಮಾರಂಭವು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಹವ್ಯಕ ವಲಯದ ಅಧ್ಯಕ್ಷ ಈಶ್ವರ ಕುಮಾರ್ ಭಟ್ ವಹಿಸಿದ್ದರು. ಕವನ ಸಂಕಲನ ಬಿಡುಗಡೆ ಮಾಡಿದ ತಾಲುಕು ಕಸಾಪ ಅಧ್ಯಕ್ಷ ಡಾ| ಹರಪ್ರಸಾದ ತುದಿಯಡ್ಕ ಮಾತನಾಡಿ ಕವನ ಸಂಕಲನಕ್ಕೆ ಶುಭ ಹಾರೈಸಿ ಸಾಹಿತ್ಯಾಸಕ್ತರನ್ನು ಹುರಿದುಂಬಿಸಿದರು.
ಪ್ರಧಾನ ಭಾಷಣಕಾರರಾದ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ಉಪನ್ಯಾಸಕ ರಾಧೇಶ್ ತೋಳ್ಪಾಡಿ, ‘ಉಷಾಕಿರಣ’ದ ಕವನಗಳ ಕಿರುಚಿತ್ರಣ ನೀಡಿ, ವಿಮರ್ಶಿಸಿ ,ಶುಭ ಹಾರೈಸಿದರು. ಮೈತ್ರಿ ಯು. ಇವರು ‘ಉಷಾಕಿರಣ’ ಕವನ ಸಂಕಲನದಿಂದ ಆಯ್ದ ಎರಡು ಕವನಗಳನ್ನು ರಾಗಬದ್ಧವಾಗಿ ಹಾಡಿದರು.
ಮುಖ್ಯ ಅತಿಥಿಗಳಾದ ಪ್ರೊ| ಟಿ. ಶ್ರೀಕೃಷ್ಣಭಟ್ ಕವನ ಸಂಕಲನಕ್ಕೆ ಶುಭ ಕೋರಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕಿ ಸಂಧ್ಯಾ ಕುಮಾರ್ ಉಪಸ್ಥಿತರಿದ್ದರು.
ಶ್ರುತಿ ಯು. ಪ್ರಾರ್ಥಿಸಿದರು. ವಿಷ್ಣು ಕಿರಣ ನೀರಬಿದ್ರೆ ಸ್ವಾಗತಿಸಿ, ಗೋಪಾಲಕೃಷ್ಣ ಭಟ್ ಶಿವ ನಿವಾಸ ವಂದಿಸಿದರು. ಶ್ರುತಿ ಹಾಗೂ ಪ್ರೀತಿ ಯು ಕಾರ್ಯಕ್ರಮ ನಿರೂಪಿಸಿದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…