ಸುಳ್ಯ: ಸರಳಿಕುಂಜದಲ್ಲಿರುವ ಧರ್ಮಾರಣ್ಯದ ಗುರುಗಣಪತಿ ಸಭಾಭವನದಲ್ಲಿ ಭಾನುವಾರ ಸುಳ್ಯ ಹವ್ಯಕ ವಲಯ ದ ವತಿಯಿಂದ ಸಂಧ್ಯಾ ಕುಮಾರ್ ಉಬರಡ್ಕ ಅವರ ಸ್ವರಚಿತ ಕವನ ಸಂಕಲನ ‘ಉಷಾಕಿರಣ’ದ ಬಿಡುಗಡೆ ಸಮಾರಂಭವು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಹವ್ಯಕ ವಲಯದ ಅಧ್ಯಕ್ಷ ಈಶ್ವರ ಕುಮಾರ್ ಭಟ್ ವಹಿಸಿದ್ದರು. ಕವನ ಸಂಕಲನ ಬಿಡುಗಡೆ ಮಾಡಿದ ತಾಲುಕು ಕಸಾಪ ಅಧ್ಯಕ್ಷ ಡಾ| ಹರಪ್ರಸಾದ ತುದಿಯಡ್ಕ ಮಾತನಾಡಿ ಕವನ ಸಂಕಲನಕ್ಕೆ ಶುಭ ಹಾರೈಸಿ ಸಾಹಿತ್ಯಾಸಕ್ತರನ್ನು ಹುರಿದುಂಬಿಸಿದರು.
ಪ್ರಧಾನ ಭಾಷಣಕಾರರಾದ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ಉಪನ್ಯಾಸಕ ರಾಧೇಶ್ ತೋಳ್ಪಾಡಿ, ‘ಉಷಾಕಿರಣ’ದ ಕವನಗಳ ಕಿರುಚಿತ್ರಣ ನೀಡಿ, ವಿಮರ್ಶಿಸಿ ,ಶುಭ ಹಾರೈಸಿದರು. ಮೈತ್ರಿ ಯು. ಇವರು ‘ಉಷಾಕಿರಣ’ ಕವನ ಸಂಕಲನದಿಂದ ಆಯ್ದ ಎರಡು ಕವನಗಳನ್ನು ರಾಗಬದ್ಧವಾಗಿ ಹಾಡಿದರು.
ಮುಖ್ಯ ಅತಿಥಿಗಳಾದ ಪ್ರೊ| ಟಿ. ಶ್ರೀಕೃಷ್ಣಭಟ್ ಕವನ ಸಂಕಲನಕ್ಕೆ ಶುಭ ಕೋರಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕಿ ಸಂಧ್ಯಾ ಕುಮಾರ್ ಉಪಸ್ಥಿತರಿದ್ದರು.
ಶ್ರುತಿ ಯು. ಪ್ರಾರ್ಥಿಸಿದರು. ವಿಷ್ಣು ಕಿರಣ ನೀರಬಿದ್ರೆ ಸ್ವಾಗತಿಸಿ, ಗೋಪಾಲಕೃಷ್ಣ ಭಟ್ ಶಿವ ನಿವಾಸ ವಂದಿಸಿದರು. ಶ್ರುತಿ ಹಾಗೂ ಪ್ರೀತಿ ಯು ಕಾರ್ಯಕ್ರಮ ನಿರೂಪಿಸಿದರು.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…