ಸುಳ್ಯ: ಸುಳ್ಯ ನಗರದ ಕಸ ಸಮಸ್ಯೆಯ ಪರಿಹಾರಕ್ಕೆ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಮೂರು ದಿನದಲ್ಲಿ ಕರೆಯಲು ನಿರ್ಧರಿಸಲಾಗಿದೆ.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಗುರುವಾರ ಸಂಜೆ ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕರ ಸಮಯ ಲಭಿಸಿದ ಕೂಡಲೇ ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಒಂದು ವಾರದ ಮಟ್ಟಿಗೆ ಹಸಿ ಕಸವನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಯಿತು. ಪ್ಲಾಸ್ಟಿಕ್ ತ್ಯಾಜ್ಯ ನೀಡದಂತೆ ಜನರಲ್ಲಿ ಜಾಗೃತಿ ಮೂಡಿಸಲು ನಗರ ಪಂಚಾಯತ್ ಸಿಬ್ಬಂದಿಗಳಿಗೆ ಸೂಚಿಸಲಾಯಿತು.
ನ.ಪಂ. ಮುಖ್ಯಾಧಿಕಾರಿ ಎನ್.ಮತ್ತಡಿ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ನ.ಪಂ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಶರೀಫ್ ಕಂಠಿ, ನ.ಪಂ. ಇಂಜಿನಿಯರ್ ಶಿವಕುಮಾರ್, ಆರೋಗ್ಯಾಧಿಕಾರಿ ರವಿಕೃಷ್ಣ, ಸ್ವಚ್ಛ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ ಮತ್ತಿತರರು ಉಪಸ್ಥಿತರಿದ್ದರು
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…