ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಸಭೆ ಸಂಪಾಜೆ ಪಯಸ್ವಿನಿ ಸಹಕಾರಿ ಸದನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೋಬಳಿ ಮಟ್ಟದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಪಾಜೆ ಹೋಬಳಿ ಘಟಕ ಕಸಾಪ ಸಮಿತಿಯ ಅಧ್ಯಕ್ಷರಾಗಿ ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ ಉರುಬೈಲು, ಕಾರ್ಯದರ್ಶಿಗಳಾಗಿ ಯಕ್ಷಗಾನ ಭಾಗವತರಾದ ಬಿ.ಜೆ.ಯಶೋಧರ, ಸಾಹಿತಿ ಸಹನಾ ಕಾಂತಬೈಲು, ಕೋಶಾಧಿಕಾರಿಯಾಗಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಗೌರವ ಸಲಹೆಗಾರರಾಗಿ ವೆಂಕಪ್ಪ ಮಾಸ್ತರ್ ಮತ್ತು ಜಿಲ್ಲಾ ಸಮಿತಿ ಸದಸ್ಯರಾಗಿ ಲೋಕನಾಥ್ ಅಮೆಚೂರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ನಿವೃತ ಶಿಕ್ಷಕ ಇಬ್ರಾಹಿಂ ಮಾಸ್ತರ್, ಜಾನಪದ ಕಲಾವಿಧ ದೇವಪ್ಪ ಕೊಯನಾಡು, ಲೋಕನಾಥ್ ಅಮೆಚೂರ್ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…