ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಸಭೆ ಸಂಪಾಜೆ ಪಯಸ್ವಿನಿ ಸಹಕಾರಿ ಸದನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೋಬಳಿ ಮಟ್ಟದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಪಾಜೆ ಹೋಬಳಿ ಘಟಕ ಕಸಾಪ ಸಮಿತಿಯ ಅಧ್ಯಕ್ಷರಾಗಿ ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ ಉರುಬೈಲು, ಕಾರ್ಯದರ್ಶಿಗಳಾಗಿ ಯಕ್ಷಗಾನ ಭಾಗವತರಾದ ಬಿ.ಜೆ.ಯಶೋಧರ, ಸಾಹಿತಿ ಸಹನಾ ಕಾಂತಬೈಲು, ಕೋಶಾಧಿಕಾರಿಯಾಗಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಗೌರವ ಸಲಹೆಗಾರರಾಗಿ ವೆಂಕಪ್ಪ ಮಾಸ್ತರ್ ಮತ್ತು ಜಿಲ್ಲಾ ಸಮಿತಿ ಸದಸ್ಯರಾಗಿ ಲೋಕನಾಥ್ ಅಮೆಚೂರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ನಿವೃತ ಶಿಕ್ಷಕ ಇಬ್ರಾಹಿಂ ಮಾಸ್ತರ್, ಜಾನಪದ ಕಲಾವಿಧ ದೇವಪ್ಪ ಕೊಯನಾಡು, ಲೋಕನಾಥ್ ಅಮೆಚೂರ್ ಮತ್ತಿತರರು ಉಪಸ್ಥಿತರಿದ್ದರು.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…